KKNEWS:JDS ಅನೇಕ ಶಾಸಕರು ಪಕ್ಷ ತೊರೆಯಲು ಸಿದ್ಧರಾಗಿದ್ದರು..: ಸಿಎಂ ಸಿದ್ದರಾಮಯ್ಯ
ಮಂಡ್ಯ: ಜೆಡಿಎಸ್ ನ ಅನೇಕ ಶಾಸಕರು ಪಕ್ಷ ತೊರೆಯಲು ಸಿದ್ಧರಾಗಿದ್ದ ಕಾರಣ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಬಿಜೆಪಿ ನಡುವೆ ಮೈತ್ರಿ ಮಾಡಿಕೊಳ್ಳುವ ಅನಿವಾರ್ಯತೆಗೆ ಸಿಲುಕಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿ, ”2018 ರಲ್ಲಿ ಜೆಡಿಎಸ್ 37 ಸ್ಥಾನಗಳನ್ನು ಪಡೆದಿತ್ತು ಆದರೆ 2023 ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗೆದ್ದಿದ್ದು 18 ಸ್ಥಾನಗಳನ್ನು ಕಳೆದುಕೊಂಡಿದೆ. ಶೂನ್ಯ ಆಗದಂತೆ ತಡೆಯಲು ಭಯದಿಂದ ಜೆಡಿಎಸ್ ನಾಯಕರು ಮೈತ್ರಿ ನಾಟಕ ಆಡಿದ್ದಾರೆ”ಎಂದರು.
ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಲು ಇಷ್ಟಪಡುತ್ತೇನೆ ಎಂದು ಹೇಳಿದ್ದು, ಇಂದು ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿದ್ದಾರೆ. ನಾನು ಕೈಮುಗಿದು ಪ್ರಾರ್ಥಿಸುತ್ತೇನೆ, ದಯವಿಟ್ಟು ನಿಮ್ಮ ಜನತಾ ದಳದಿಂದ ‘ಜಾತ್ಯತೀತ’ ಪದವನ್ನು ತೆಗೆದುಹಾಕಿ. ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ನಿಮಗೆ ಇನ್ನು ಮುಂದೆ ಜಾತ್ಯತೀತ ಪದವನ್ನು ಬಳಸುವ ನೈತಿಕ ಹಕ್ಕಿಲ್ಲ” ಎಂದರು.
ಶ್ರೀ ಮಹಾಂತೇಶ ಹಿರೇಮಠ ಅವರ ಸಾರಥ್ಯದಲ್ಲಿ
ಸುದ್ದಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ 9743594472