KKNEWS:Lok Sabha Elections: ಮುಂದಿನ ವಾರದಿಂದ ಬಿಜೆಪಿಯ 4 ತಂಡಗಳ ಪ್ರವಾಸ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ, ರಾಜ್ಯದ ಹಿರಿಯ ನಾಯಕರ ನೇತೃತ್ವದಲ್ಲಿ 4 ತಂಡಗಳನ್ನು ಮಾಡಿ ಮುಂದಿನ ವಾರದಿಂದ ರಾಜ್ಯ ಪ್ರವಾಸ ಪ್ರಾರಂಭಿಸಲು ಬಿಜೆಪಿ ನಿರ್ಧರಿಸಿದೆ.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಕರ್ನಾಟಕದ ಉಸ್ತುವಾರಿ ರಾಧಾಮೋಹನ್‌ ದಾಸ ಅಗರ್ವಾಲ್‌, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಇತರ ನಾಯಕರು ನಡೆಸಿದ ಮಹತ್ವದ ಸಂಘಟನಾತ್ಮಕ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದ್ದು, ಪ್ರತಿಯೊಂದು ಕ್ಷೇತ್ರದ ಬಗ್ಗೆಯೂ ವಿಸ್ತೃತವಾಗಿ ಚರ್ಚೆ ನಡೆದಿದೆ.
ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೀವ್‌, ಪ್ರತಿ ಯೊಂದು ಲೋಕಸಭಾ ಕ್ಷೇತ್ರಗಳ ಕುರಿತು ವಿಸ್ತೃತ ಚರ್ಚೆ ಆಗಿದೆ. ಆಂತರಿಕ ವರದಿ ಪ್ರಕಾರ 28 ಲೋಕಸಭಾ ಕ್ಷೇತ್ರ ಗಳನ್ನೂ ಗೆಲ್ಲುವಂಥ ಸ್ಥಿತಿ ಇದೆ.
ತಳಮಟ್ಟದಲ್ಲಿ ಪಕ್ಷದ ಚಟುವಟಿಕೆಗಳು, ರಾಜ್ಯ ನಾಯಕರ ಲೋಕಸಭಾ ಕ್ಷೇತ್ರವಾರು ಪ್ರವಾಸ ಮತ್ತು ಕೇಂದ್ರದ ನಾಯಕರು ರಾಜ್ಯ ಪ್ರವಾಸ ಮಾಡಿದಾಗ ಕಾರ್ಯಕ್ರಮ ಮತ್ತು ಚಟುವಟಿಕೆಗಳ ಕುರಿತು ಚರ್ಚೆ ಮಾಡಿದ್ದೇವೆ ಎಂದರು.
ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೀವ್‌, ಪ್ರತಿ ಯೊಂದು ಲೋಕಸಭಾ ಕ್ಷೇತ್ರಗಳ ಕುರಿತು ವಿಸ್ತೃತ ಚರ್ಚೆ ಆಗಿದೆ. ಆಂತರಿಕ ವರದಿ ಪ್ರಕಾರ 28 ಲೋಕಸಭಾ ಕ್ಷೇತ್ರ ಗಳನ್ನೂ ಗೆಲ್ಲುವಂಥ ಸ್ಥಿತಿ ಇದೆ.
ತಳಮಟ್ಟದಲ್ಲಿ ಪಕ್ಷದ ಚಟುವಟಿಕೆಗಳು, ರಾಜ್ಯ ನಾಯಕರ ಲೋಕಸಭಾ ಕ್ಷೇತ್ರವಾರು ಪ್ರವಾಸ ಮತ್ತು ಕೇಂದ್ರದ ನಾಯಕರು ರಾಜ್ಯ ಪ್ರವಾಸ ಮಾಡಿದಾಗ ಕಾರ್ಯಕ್ರಮ ಮತ್ತು ಚಟುವಟಿಕೆಗಳ ಕುರಿತು ಚರ್ಚೆ ಮಾಡಿದ್ದೇವೆ ಎಂದರು.





Post a Comment

0Comments

Post a Comment (0)