Belgavi; ಜೆ.ಪಿ.ನಡ್ಡಾ ನೇತೃತ್ವದ ಮಹತ್ವದ ಸಭೆ ನಾಳೆ ಮಧ್ಯಾಹ್ನಕ್ಕೆ ಮುಂದೂಡಿಕೆ
ಮಂಗಳವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸುವ ನಡ್ಡಾ ಅವರು ನೇರವಾಗಿ ಚಿಕ್ಕೋಡಿಗೆ ತೆರಳಿ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಧ್ಯಾಹ್ನ ಬೆಳಗಾವಿಗೆ ಆಗಮಿಸಿ ಬೆಳಗಾವಿ, ಚಿಕ್ಕೋಡಿ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಇದಾದ ಬಳಿಕ ಸಂಜೆ ಜೀರಗೆ ಸಭಾಭವನದಲ್ಲಿ ಪ್ರಬುದ್ಧರ ಜೊತೆ ಸಭೆ ನಡೆಸಲಿದ್ದಾರೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ