ಬೆಂಗಳೂರು: ಇಂದು ಅಥವಾ ನಾಳೆ ‘ಗೃಹಲಕ್ಷ್ಮಿ’ ಹಣ ಖಾತೆಗೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಅವರು, ಯಾವುದೇ ಸಂದರ್ಭದಲ್ಲಿ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ, ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ. ಅಧಿಕಾರ ಕೊಟ್ಟಾಗ 40 ಪರ್ಸಂಟ್ ಕಮಿಷನ್ ತೆಗೆದುಕೊಂಡು ಮನೆಯಲ್ಲಿ ಕುಳಿತರು ಎಂದು ಟೀಕಿಸಿದ್ದಾರೆ.
ಗೃಹಲಕ್ಷ್ಮಿ ಹಣವನ್ನು ಮೇ 1ರಂದು ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಕ್ರೆಡಿಟ್ ಆಗಲಿದೆ ಎಂದು ಹೇಳಿದರು.