ಗೃಹಲಕ್ಷ್ಮಿ ಯೋಜನೆ ಪಡೆಯಲು ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿಯವರು ಅರ್ಹರಲ್ಲ.

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಗೃಹಲಕ್ಷ್ಮಿ ಯೋಜನೆ ಪಡೆಯಲು ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿಯವರು ಅರ್ಹರಲ್ಲ. ಅಂತಹ 1.78 ಲಕ್ಷ ಫಲಾನುಭವಿಗಳನ್ನು ಪತ್ತೆ ಮಾಡಲಾಗಿದೆ ಎಂದು ಸಚಿವೆ ಲಕ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಗೃಹಲಕ್ಷ್ಮೀ ಯೋಜನೆ ಮಾರ್ಚ್ ನಲ್ಲಿ ಜಾರಿಗೆ ಬಂದಿತ್ತು.
ಬಳಿಕ ಹೊಸದಾಗಿ 2 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದರಲ್ಲೀಗ ಈ ಅರ್ಜಿಗಳನ್ನೂ ಪರಿಗಣಿಸಲು ಸರಕಾರ ನಿರ್ಧರಿಸಿದ್ದಾರೆ. ಆದರೆ ಆದಾಯ ತೆರಿಗೆ ಪಾವತಿದಾರರ ಮನೆಯ ಯಜಮಾನಿಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಹೊರಗಿಡಲಾಗಿದೆ ಎಂದಿದ್ದಾರೆ.

ಆದಾಯ ತೆರಿಗೆ ಪಾವತಿಸದ ಕುರಿತು ದೃಢೀಕರಣ ಪತ್ರ ತರಲು ಕೇಳಿದ್ದೆವು. 1.78 ಲಕ್ಷ ಮಂದಿ ಪೈಕಿ 6 ಸಾವಿರ ಮಂದಿ ದೃಢೀಕರಣ ಪತ್ರ ಸಲ್ಲಿಸಿದ್ದಾರೆ. ಆದರೆ ಈ ವೇಳೆ ಆದಾಯ ತೆರಿಗೆಯ ಧೃಢೀಕರಣ ನೀಡದ ಅಷ್ಡೂ ಮಂದಿಯನ್ನು ಈ ಯೋಜನೆಯಿಂದ ಹೊರಗಿಡಲಾಗಿದೆ. ಇ‌ನ್ನುಳಿದ ಫಲಾನುಭವಿಗಳು ಯಾವುದೇ ಚಿಂತೆ ಮಾಡಬೇಕಿಲ್ಲ. ಅವರಿಗೆಲ್ಲಾ ಗೃಹಲಕ್ಷ್ಮೀ ಯೋಜನೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ,ಲೋಕಸಭಾ ಚುನಾವಣೆ ನೀತಿ ಸಂಹಿತೆಯ ವೇಳೆ ಸಲ್ಲಿಸಲಾದ ಅರ್ಜಿಗಳನ್ನು ಕೂಡ ಪರಿಗಣಿಸಿ ಅವರಿಗೂ ಗೃಹಲಕ್ಷ್ಮೀ ದೊರೆಯಲಿದೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

Post a Comment

0Comments

Post a Comment (0)