ಗೌರಿ-ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪನೆ ಮಾಡುವವರು ವಿಷಕಾರಿ ರಾಸಾಯನಿಕ ಲೋಹದ ಲೇಪದ ಪ್ಲಾಸ್ಟರ್ ಆಫ್ ಪ್ಯಾರೀಸ್ ಅಂತಹ ಪರಿಸರಕ್ಕೆ ಹಾನಿ ಮಾಡುವಂತಹ ಸಾಮಾಗ್ರಿಗಳಿಂದ ತಯಾರಿಸಿದ ವಿಗ್ರಹಗಳನ್ನು ಬಳಸದೆ ಪರಿಸರ ಸ್ನೇಹಿ ಸಾದಾ ಜೇಡಿ ಮಣ್ಣಿನಿಂದ ತಯಾರಿಸಿದ ವಿಗ್ರಹ ಬಳಸುವುದು.
ಈ ಬಗ್ಗೆ ನಗರಸಭೆಯಿಂದ ಅನುಮತಿ ಪಡೆಯುವ ಮುನ್ನ ರೂ.100 ಗಳ ಛಾಪಾ ಕಾಗದದ ಮೇಲೆ ಮುಚ್ಚಳಿಕೆಯನ್ನು ಸಲ್ಲಿಸುವುದು ಸರ್ಕಾರದ ಆದೇಶದ ಪ್ರಕಾರ ಕಡ್ಡಾಯವಾಗಿದೆ. ಇಲ್ಲವಾದಲ್ಲಿ ನಿಯಂತ್ರಣ ಮಂಡಳಿಯ ಜಲಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ 1974ರ ಪ್ರಕಾರ ಕಲಂ 33(ಆ)ರ ಪ್ರಕಾರ ರೂ.10 ಸಾವಿರ ವರೆಗೂ ದಂಡ ವಿಧಿಸಲಾಗುತ್ತದೆ. ಜೊತೆಗೆ ಜೈಲುವಾಸ ವಿಧಿಸುವುದಾಗಿದೆ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡಚಣೆಯಾಗದಂತೆ ಪ್ರತಿಷ್ಠಾಪಿಸಿ ಕಾರ್ಯಕ್ರಮಆಯೋಜಿಸುವುದು.