ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ವೃದ್ಧೆಯಾದ ಅಕ್ಕಾತಾಯಿ ಲಂಗೋಟಿ ಅವರು ತನ್ನ ಹತ್ತು ಕಂತಿನ ಗೃಹಲಕ್ಷ್ಮಿ ಹಣವನ್ನ ಕೂಡಿಟ್ಟು ನಿನ್ನೆ ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಇಂದು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದಾರೆ.
ಬೆಳಗಾವಿ, ಆಗಸ್ಟ್ 26: ಗೃಹಲಕ್ಷ್ಮೀ ಹಣದಿಂದ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿ ಲಂಗೋಟಿಯನ್ನು ಸಿಎಂ ಸಿದ್ದರಾಮಯ್ಯ (Siddaramaiah) ಇಂದು ಬೆಳಗಾವಿ ಏರ್ಪೋರ್ಟ್ನಲ್ಲಿ ಭೇಟಿ ಮಾಡಿದ್ದಾರೆ. ಅಕ್ಕಾತಾಯಿಯನ್ನು ಸಿಎಂಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಚಯಿಸಿದರು. ಈ ವೇಳೆ ಸಿಎಂಗೆ ಕಂಬಳಿ ಹೊದಿಸಿ, ಹಾರ ಹಾಕಿ ಹೋಳಿಗೆ ತಿನ್ನಿಸಿದ್ದಾರೆ. ಊಟ ಹಾಕಿಸಿದ ವಿಚಾರ ತಿಳಿದ ಸಿಎಂ ಸಂತಸ ವ್ಯಕ್ತಪಡಿಸಿದ್ದಾರೆ. ಗೃಹಲಕ್ಷ್ಮೀ ಯೋಜನೆ ನಿಲ್ಲಿಸಬೇಡಿ ಎಂದು ಅಕ್ಕಾತಾಯಿ ಮನವಿ ಮಾಡಿದ್ದು, ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲವೆಂದು ಸಿಎಂ ಭರವಸೆ ನೀಡಿದ್ದಾರೆ.
ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ವೃದ್ಧೆಯಾದ ಅಕ್ಕಾತಾಯಿ ಲಂಗೋಟಿ ಅವರು ತನ್ನ ಹತ್ತು ಕಂತಿನ ಗೃಹಲಕ್ಷ್ಮಿ ಹಣವನ್ನ ಕೂಡಿಟ್ಟು ನಿನ್ನೆ ಗ್ರಾಮದೇವತೆಗೆ ಪೂಜೆ ಸಲ್ಲಿಸಿ ಊರಿಗೆ ಹೋಳಿಗೆ ಊಟ ಹಾಕಿಸಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ಮಾಡಿ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಹೆಚ್.ಡಿ.ಕುಮಾರಸ್ವಾಮಿ ಹಿಟ್ ಮತ್ತು ರನ್ ಕೇಸ್ ಇದ್ದಂತೆ: ಸಿಎಂ ವಾಗ್ದಾಳಿ
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಜೈಲಿಗೆ ಹಾಕುವ ಉದ್ದೇಶವಿಲ್ಲ. ಕಾನೂನು ಉಲ್ಲಂಘನೆ ಮಾಡಿದರೆ ಏನು ಮಾಡುತ್ತಾರೆ? 100 ಸಿದ್ದರಾಮಯ್ಯ ಬಂದ್ರೂ ಬಂಧಿಸಲು ಆಗಲ್ಲ ಅಂದ್ರು. ಬಂಧಿಸಲು ಒಬ್ಬ ಕಾನ್ಸ್ಟೇಬಲ್ ಸಾಕು ಎಂದು ಹೇಳಿದ್ದೆ. ಹೆಚ್.ಡಿ.ಕುಮಾರಸ್ವಾಮಿ ಹಿಟ್ ಮತ್ತು ರನ್ ಕೇಸ್ ಇದ್ದಂತೆ. ಯಾವುದೇ ಪ್ರಕರಣ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವುದಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.