ಅತ್ಯಾಧುನಿಕ ಸೌಲಭ್ಯದೊಂದಿಗೆ ಸುಸಜ್ಜಿತವಾದ ಮಲಪ್ರಭಾ ಮಲ್ಟಿಸ್ಟೇಷಾಲಿಟಿ ಹಾಸ್ಪಿಟಲ್ ಜೂ,22ರಂದು ಉದ್ಘಾಟನೆ

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಬೈಲಹೊಂಗಲ: ಈ ಭಾಗದ ಜನತೆಗೆ ಅನುಕೂಲ ಕ್ಕಾಗಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಮತ್ತು ಅತ್ಯಾಧುನಿಕ ಸೌಲಭ್ಯದೊಂದಿಗೆ ಸುಸಜ್ಜಿತವಾದ ಮಲಪ್ರಭಾ ಮಲ್ಟಿಸ್ಟೇಷಾಲಿಟಿ ಹಾಸ್ಪಿಟಲ್ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಜೂ.22 ರಂದು ಬೆಳಗ್ಗೆ 10.30 ಕ್ಕೆ ಪಟ್ಟಣದ ಸೋಮವಾರ ಪೇಟೆಯ ಶ್ರೀ ದಾನಮ್ಮದೇವಿ ದೇವಸ್ಥಾನದ ಹತ್ತಿರ ಜರುಗಲಿದೆ ಎಂದು ಎಲುವು ಕೀಲು ರೋಗ ಶಸ್ತ್ರ ತಜ್ಞ ಡಾ. ಮಂಜುನಾಥ ಮುದಕನಗೌಡರ ಹೇಳಿದರು.

ಗುರುವಾರ ಪಟ್ಟಣದ ನೂತನ ಮಲಪ್ರಭಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಪಟ್ಟಣದಲ್ಲಿ ಕಳೆದ 13 ವರ್ಷಗಳಿಂದ ಆಸ್ಪತ್ರೆ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ನಾಡಿನಲ್ಲಿ ಮನೆ ಮಾತಾಗಿದ್ದು, ಅಲ್ಲದೇ ನಮ್ಮ ನೂತನ ಜಾಗೆಯಲ್ಲಿ 100 ಹಾಸಿಗೆಗಯುಳ್ಳ ಸುಸಜ್ಜಿತವಾದ ಆಸ್ಪತ್ರೆಯಲ್ಲಿ ಎಲ್ಲ ತರಹದ ಚಿಕಿತ್ಸೆಗೆ ಸಕಲ ಸೌಲಭ್ಯಗಳನ್ನು ನೀಡಲು ಸಿದ್ಧತೆ ಕೈಗೊಳ್ಳಲಾಗಿದೆ. ಹೆರಿಗೆ, ಹೈಟೆಕ್ ಶಸ್ತ್ರ ಚಿಕಿತ್ಸಾ ನಿಗಾ ಘಟಕ, 2447 ತುರ್ತು ನಿಗಾ ಸೇವೆ ಇನ್ನಿತರ ಸೌಲಭ್ಯ ದೊರಕಲಿದೆ ಅಲ್ಲದೇ ಸರ್ಕಾರದ ಆರೋಗ್ಯ ಯೋಜನೆಗಳ ಪಡೆದುಕೊಳ್ಳಬಹುದಾಗಿದೆ. ಕೂಡ

ಈ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಮುನ್ನೆಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.



'. ಕಾರ್ಯಕ್ರಮದ ಸಾನ್ನಿಧ್ಯವನ್ನು ಸುಕ್ಷೇತ್ರ ಇಂಚಲದ ಡಾ. ಶಿವಾನಂದ ಭಾರತಿ ಸ್ವಾಮೀಜಿ, ಮುರಗೋಡದ ನೀಲಕಂಠ ಸ್ವಾಮೀಜಿ, ಮೂರುಸಾವಿರಮಠದ ಪ್ರಭು ನೀಲಕಂಠ ಸ್ವಾಮೀಜಿ, ನಯಾನಗರದ ಅಭಿನವ ಸಿದ್ದಲಿಂಗ ಸ್ವಾಮೀಜಿ, ಧಾರ್ಮಿಕ ದತ್ತಿ ಇಲಾಖೆ ನಿರ್ದೇಶಕ ಮಹಾಂತಯ್ಯ ಶಾಸ್ತ್ರಿ ಆರಾಧಿಮಠ, ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲೆಯದ ರಾಜಯೋಗಿನಿ ಬಿ.ಕೆ. ಪ್ರಭಾ ಅಕ್ಕಾ, ಮುಸ್ಲಿಂ ಧರ್ಮಗುರು ಮೌಲಾನಾ ಶೌಕತಅಲಿ ಬಾದಿ ವಹಿಸಲಿದ್ದಾರೆ.



ಶಾಸಕ ಮಹಾಂತೇಶ ಕೌಜಲಗಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಲಕ್ಷ್ಮೀ ಹೆಬ್ಬಾಳಕರ, ಸಂಸದರಾದ ಜಗ ದೀಶ ಶೆಟ್ಟರ, ಈರಣ್ಣ ಕಡಾಡಿ, ಕೆಎಲ್‌ಇ ನಿರ್ದೇಶಕ ಡಾ. ಪ್ರಭಾಕರ ಕೋರೆ ಹಾಗೂ ಅತಿಥಿಗಳಾಗಿ ಶಾಸಕರುಗಳಾದ ಬಾಬಾಸಾಹೇಬ ಪಾಟೀಲ, ವಿಶ್ವಾಸ ವೈದ್ಯ, ಮಾಜಿ ಶಾಸಕ ಡಾ. ವಿಶ್ವನಾಥ ಪಾಟೀಲ, ಜಗದೀಶ ಮೆಟಗುಡ್ಡ, ಮಹಾಂತೇಶ ದೊಡಗೌಡ್ರ, ಜಿಪಂ. ಮಾಜಿ ಸದಸ್ಯ ಶಂಕರ ಮಾಡಲಗಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಈಶ್ವರಪ್ಪ ಗಡಾದ,ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಯ ಸಿದ್ದನ್ನವರ, ಪುರಸಭೆ ಅಧ್ಯಕ್ಷ ವಿಜಯ ಬೋಳನ್ನವರ, ವಿಶೇಷ ಸನ್ಮಾನಿತರಾಗಿ ಡಾ.ಬಿ.ಎಸ್. ಮಹಾಂತಶೆಟ್ಟಿ, ಹಿರಿಯ ವೈದ್ಯ ಡಾ.

ಎ.ಎನ್. ಬಾಳಿ ಆಗಮಿಸಲಿದ್ದಾರೆ ಎಂದರು. ಚಿಕ್ಕಮಕ್ಕಳ ತಜ್ಞ ಡಾ. ತಜ್ಞ ಡಾ. ಶರಣಕುಮಾರ ಅಂಗಡಿ, ಸ್ತ್ರೀರೋಗ ತಜ್ಞ ಡಾ. ಅಶೋಕ ದೊಡವಾಡ ಮಾತನಾಡಿದರು.



ಪತ್ರಿಕಾಗೋಷ್ಠಿಯಲ್ಲಿ ಡಾ. ರವೀಂದ್ರಕುಮಾರ ಜಕನೂರ ಹಾಗೂ ಸಿಬ್ಬಂದಿ ಇದ್ದರು.

Post a Comment

0Comments

Post a Comment (0)