ಬೆಳಗಾವಿ ಚಳಿಗಾಲ ಅಧಿವೇಶನ ಮುಗಿದು ತಕ್ಷಣವೇ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ...

ಮಹಾಂತೇಶ ಹಿರೇಮಠ ಕಿತ್ತೂರು ಕ್ರಾಂತಿ ಟಿವಿ
By -
0
ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು, ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು.
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಗಿದ ತಕ್ಷಣವೇ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು, ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಸ್ಥಾನ ಲಭಿಸಲಿದೆ ಎಂದರು.

ಬೆಳಗಾವಿಯಲ್ಲಿ ನಿನ್ನೆ ನಡೆದ ಡಿ.ಕೆ.ಶಿವಕುಮಾರ್‌ ಬಣದ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯಿಸಿದ ಇಕ್ಬಾಲ್ ಹುಸೇನ್, ಪ್ರೀತಿ ವಿಶ್ವಾಸಕ್ಕಾಗಿ ಊಟಕ್ಕೆ ಸೇರುತ್ತೇವೆ. ಅದನ್ನು ಬಣ ರಾಜಕೀಯ, ಶಕ್ತಿ ಪ್ರದರ್ಶನ ಎನ್ನುವುದು ಸರಿಯಲ್ಲ ಎಂದರು.

Post a Comment

0Comments

Post a Comment (0)