ಮುರಗೋಡದ ಶ್ರೀ ಮಹಾಂತ ದುರದುಂಡೇಶ್ವರ ಮಠದಲ್ಲಿ ಲಿಂ. ಶ್ರೀ ಮಹಾಂತ ಶಿವಯೋಗಿಗಳ 54ನೇ ಪುಣ್ಯ ಸ್ಮರಣೋತ್ಸವ ಹಾಗೂ ಜಾತ್ರಾ ಮಹೋತ್ಸವ ಸಂದರ್ಭದಲ್ಲಿ ಶಿಕ್ಷಣ, ಆರೋಗ್ಯ, ಸಮಾಜ ಧಾರ್ಮಿಕ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿದ ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರಿಗೆ 'ಮುರಗೋಡ ಮುಕುಟ' ಪ್ರಶಸ್ತಿ ಪ್ರದಾನ ಮಾಡಲಾಯಿತು. ಶ್ರೀಮಠದ ಪೀಠಾಧಿಪತಿ ನೀಲಕಂಠ ಮಹಾಸ್ವಾಮೀಜಿ, ಕೆಎಲ್ಇ ನಿರ್ದೇಶಕ ವಿಜಯ ಮೆಟಗುಡ್ಡ ಹಾಗೂ ಶ್ರೀಮಠದ ಭಕ್ತರು ಉಪಸ್ಥಿತರಿದ್ದರು.
ಕೆಎಲ್ಇ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರಿಗೆ 'ಮುರಗೋಡ ಮುಕುಟ' ಪ್ರಶಸ್ತಿ
By -
February 22, 2026
0
Tags: